ಇಂದೇ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಆಗಮನ

0

ಬೆಂಗಳೂರು ಅ 4: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು ಇಂದೇ ರಾಜ್ಯಕ್ಕೆ ಅಗಮಿಸುತ್ತಿದ್ದು ನಾಳೆಯಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ.

ಕೇಂದ್ರ ತಂಡ ಹತ್ತು ಸದಸ್ಯರನ್ನೊಗೊಂಡಿದೆ.  ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಎಲ್ಲಾ ಸದಸ್ಯರು ರಂದು ಬೆಂಗಳೂರಿಗೆ ಅಗಮಿಸಿ ವಾಸ್ತವ್ಯ ‌ಮಾಡಲಿದ್ದಾರೆ.
ಅಕ್ಟೋಬರ್‌ 5 ರಂದು ಮೂರೂ ತಂಡಗಳು ಬೆಳಿಗ್ಗೆ 9.30-10.30ರ ವರಗೆ ಕರ್ನಾಟಕ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ನಡೆಯಲಿವೆ. ಮಧ್ಯಾಹ್ನ 12 ಗಂಟೆಗೆ ವಿಧಾನ ಸೌಧ ಕೊಠಡಿಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿವೆ.

ಜಿಲ್ಲಾ ಪ್ರವಾಸ ವಿವರ
ಮೊದಲ‌ ತಂಡ:
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಐ.ಎ.ಎಸ್. ಅವರ ನೇತೃತ್ವ. ಇದರಲ್ಲಿ ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆಯ ನಿರ್ದೇಶಕರಾದ ಡಾ. ಜೆ ಪೊನ್ನುಸ್ವಾಮಿ,
ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹೇಂದ್ರ ಚಂಡೇಲಿಯ ,
ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ,ರಾಜ್ಯ ಕೃಷಿ ಆಯುಕ್ತರಾದ ಎಸ್ ಪಾಟೀಲ್ ಐ.ಎ.ಎಸ್ ಅವರನ್ನು ಒಳಗೊಂಡಿದೆ

ಎರಡನೆ ತಂಡ:

ಕೇಂದ್ರ ಕುಡಿಯುವ ನೀರು ಹಾಗು ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ
ಡಿ.ರಾಜಶೇಖರ್ ಐ.ಎ.ಎಸ್ ನೇತೃತ್ವ, ಪಶುಸಂಗೋಪನೆ ಇಲಾಖೆ ‌ನಿರ್ದೇಶಕರಾದ ಆರ್ ಥಾಕರೆ,
ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತರಾದ ಮೋತಿರಾಂ , ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರಾದ ಕರೀಗೌಡ ಐ.ಎ.ಎಸ್ ಅವರನ್ನು ಒಳಗೊಂಡಿದೆ.

ಮೂರನೇ ತಂಡ:

ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ .ವಿ ಇವರ ನೇತೃತ್ವ, ಎಂ.ಎನ್ ಸಿ.ಎಫ್ ಸಿ ಯ ಉಪ‌ ನಿರ್ದೇಶಕರಾದ. ಕರಣ್ ಚೌಧರಿ, ಆಹಾರ ಮತ್ತು ನಾಗರೀಕ‌ ಸರಬರಾಜು ಇಲಾಖೆ ಉಪ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ ಶ್ರೀನಿವಾಸ ರೆಡ್ಡಿ ಇರಲಿದ್ದಾರೆ.

ತಂಡಗಳ ಪ್ರವಾಸ ವಿವರ ;
ಮೊದಲ ತಂಡ – ಅ 5 ರಂದು ಬೆಳಗಾವಿಗೆ
ಆಗಮನ .

ಅ 6 :ರಂದು ಬೆಳಗಾವಿ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಬರ ಪರಿಶೀಲನೆ

ಅ. 7
ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬರ ಪರಿಶೀಲನೆ

ಅ 8 ಬೆಂಗಳೂರು ಪ್ರಯಾಣ

ಎರಡನೆ ತಂಡ : ಗದಗ್ ಕೊಪ್ಪಳ ,ಬಳ್ಳಾರಿ ವಿಜಯನಗರ ಜಿಲ್ಲಾ ಪ್ರವಾಸ ಬರ ಅಧ್ಯಯನ.

ಅ 5 ಬೆಂಗಳೂರಿನಿಂದ ಹುಬ್ಬಳಿಗೆ ಪ್ರಯಾಣ ವಾಸ್ತವ್ಯ.

ಅ 6 .ಗದಗ ಹಾಗೂ ಕೊಪ್ಪಳ ‌ಜಿಲ್ಲೆಗಳ ಬರ ಪರಿಸ್ಥಿತಿ ಅಧ್ಯಯನ

ಅ 7. ವಿಜಯನಗರ, ಬಳ್ಳಾರಿ ಜಿಲ್ಲೆಗಳ ಬರ ಅಧ್ಯಯನ

ಅ 8 ಬೆಂಗಳೂರು ಪ್ರಯಾಣ.

ಮೂರನೇ ತಂಡ:
ಅ 6 . ಚಿಕ್ಕಬಳ್ಳಾಪುರ , ತುಮಕೂರು ಜಿಲ್ಲೆಗಳ ಪ್ರವಾಸ ನಡೆಸಿ ಚಿತ್ರದುರ್ಗ ವಾಸ್ತವ್ಯ.

ಅ 7 ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆ ಪ್ರವಾಸ ನಡೆಸಿ ಬೆಂಗಳೂರು ಆಗಮನ

ಅ 8 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನ.

ಮೂರು ತಂಡಗಳು ಅ 8 ರಂದು ಬೆಂಗಳೂರು ಆಗಮಿಸಿ ಅ 9 ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಥಳೀಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ತೆರಳಲಿವೆ.

ಕೃಷಿ ಸಚಿವರ ಸೂಚನೆ: ಕೇಂದ್ರ ತಂಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ,ಕೃಷಿ , ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

LEAVE A REPLY

Please enter your comment!
Please enter your name here