ಬೆಂಗಳೂರು, ಮಾರ್ಚ್ 19: ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರ ಪರಿವಾಗಿ ಉತ್ತರಿಸಿದ ಸಚಿವರು, ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳ ತೆಗೆದುಕೊಂಡಿದ್ದು, ಸಾಪ್ತಾಹಿಕ ಮೇವಿನ ವರದಿಯನ್ವಯ ಯಾವುದೇ ತಾಲ್ಲೂಕಿನಲ್ಲಿ...
ಬೆಂಗಳೂರು, ಮಾರ್ಚ್ 19: ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು. ಅಂದಿನ ಕಾನೂನುಗಳು ಅಂದಿನ ದಿನಕ್ಕೆ ಅನ್ವಯವಾಗಲಿದೆ. ಇಂದಿನ ಕಾನೂನುಗಳು ಈ ಹಿಂದಿನ ದಿನಗಳ ಕಾನೂನುಗಳಿಗೆ ಅನ್ವಯವಾಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಾ. ಯತೀಂದ್ರ ಎಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ನಡವಳಿ, ಸಾಗುವಳಿ ಚೀಟಿ ವಿತರಣಾ ವಹಿ, ಕಿಮ್ಮತ್ತು ಪಾವತಿಸಿರುವ ವಹಿ ಇತ್ಯಾದಿಗಳಲ್ಲಿ...
ಬೆಂಗಳೂರು- ಮಾರ್ಚ್ 19:ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚೀಲನಹಳ್ಳಿ ಗ್ರಾಮದ ಸರ್ವೆ ನಂ. 14 ರಲ್ಲಿ 20 ಎಕರೆ ಭೂಮಿಯನ್ನು ತುಮಕೂರಿನ ಜಿಲ್ಲಾಧಿಕಾರಿ ಅವರಿಂದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಇಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರವನ್ನು (ವಧಾಗಾರ) ಸ್ಥಾಪನೆ ಮಾಡಲಾಗಿದೆ. ಕಾಮಗಾರಿಯು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕೆ. ವೆಂಕಟೇಶ್ ಅವರ ಚುಕ್ಕೆ ಗುರುತಿನ...
ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಎಲ್ಲ ಕ್ಷೇತ್ರಗಳಿಗೂ ಅಡಿಯಿಟ್ಟಾಗಿದೆ. ಕೃಷಿಕ್ಷೇತ್ರದಲ್ಲಿ ಅದರ ಬಳಕೆ ಗಮನಾರ್ಹ ಬದಲಾವಣೆಗಳನ್ನು ಉಂಟು ಮಾಡುತ್ತಿದೆ. ಇದಕ್ಕೆ ಪ್ರಸ್ತುತ ನಿದರ್ಶನ ಮಹಾರಾಷ್ಟ್ರ ರಾಜ್ಯದಲ್ಲಿ ಕಬ್ಬಿನ ಕೃಷಿಗೆ ಅದನ್ನು ಬಳಕೆ ಮಾಡಿರುವುದು. ಇದರಿಂದ ಇಳುವರಿ ಗಮನಾರ್ಹವಾಗಿ ಹೆಚ್ಚಿರುವುದು. ಬಹುಮುಖ್ಯವಾಗಿ ನೀರು, ಪೋಷಕಾಂಶದ ಬಳಕೆ ಪ್ರಮಾಣ ಕಡಿಮೆಯಾಗಿದೆ. ಇವೆಲ್ಲದರ ಪರಿಣಾಮ ಆಗುತ್ತಿದ್ದ ವೆಚ್ಚದಲ್ಲಿ ಗಮನಾರ್ಹ ಉಳಿತಾಯವಾಗಿದೆ.
ಪೂನಾ, ಬಾರಾಮತಿ, ಸಾಂಗ್ಲಿ, ಸತಾರಾ, ಕೊಲ್ಹಾಪುರ ಈ ಪ್ರದೇಶಗಳಲ್ಲಿ ಕಬ್ಬುಕೃಷಿ ಅಧಿಕ ಪ್ರಮಾಣದಲ್ಲಿ ನಡೆಯುತ್ತದೆ. ಪೂನಾ ಸಮೀಪದ ಬಾರಾಮತಿಯಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ...
ಬೆಳ್ಳಂಬೆಳಿಗ್ಗೆ ಮಂಜು ಕವಿದು ದೂರದ ಗಿಡಮರಗಳು ಕಾಣದೆ ಮಸುಕಾಗಿದ್ದವು. ಚುಮು ಚುಮು ಚಳಿ. ಎದ್ದು ಸೀದಾ ಹಸು ಕಟ್ಟಿದ ಕೊಟ್ಟಿಗೆ ಕಡೆ ನಡೆದೆ. ಹಾಲು ಕರೆದೆ. ಹಸು ಆಚೆ ಕಟ್ಟಿದೆ. ಸಗಣಿಯನ್ನು ಮನೆಯ ಹಿಂದೆಯಿದ್ದ ತಿಪ್ಪೆಗೆ ಸೇರಿಸಿದೆ. ಅಷ್ಟರಲ್ಲಾಗಲೇ ಮಗಳು ವನ್ಯ ಎದ್ದು ಹೊರ ಬಂದು ತದೇಕಚಿತ್ತದಿಂದ ಸುಮ್ಮನೆ ನೋಡುತ್ತಾ ನಿಂತಿದ್ದಳು "ಮಂಜಪ್ಪ ಅಲ್ಲಿ ನೋಡು ಚಿಗ್ನೇಚರ್ ಪೈಡರ್ ಎಷ್ಟು ಚೆನ್ನಾಗಿದೆ. ರಾತ್ರಿಯಿಂದ ಅದು ಇಲ್ಲೇ ಇದೆ, ಪಾಪ ಅದರ ಮನೆಗೆ ಹೋಗೆ ಇಲ್ಲ" ಎನ್ನುತ್ತಾ ಮೆಟ್ಟಿಲ ಎರಡು ಗೋಡೆಗಳನ್ನು ಆಧಾರವಾಗಿಸಿಕೊಂಡು ಬಲೆಯನ್ನು...
ಬೆಂಗಳೂರು: ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದೆ. ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಿಧಾನಪರಿಷತ್ತಿಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಂಗಳವಾರ ಶಾಸಕ ಸಿ. ಎನ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ ಸಹಭಾಗಿತ್ವದ ಬದಲಿಗೆ ಸರ್ಕಾರ ಅಥವಾ ಎಪಿಎಂಸಿಯ ಸ್ವಂತ ನಿಧಿಯಿಂದ ಮಾರುಕಟ್ಟೆ ಅನುಷ್ಠಾನಗೊಳಿಸಲು ನಿರ್ಧರಿಸಿ ಆರ್ಥಿಕ ಇಲಾಖೆಗೆ ಕಡತ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ದಾಸನಪುರ, ಮೈಸೂರು, ಕೋಲಾರ...
ಹೌದು ಕಾಫಿಗೆ ಉತ್ತಮ ಬೆಲೆ ಬಂದಿದೆ. ಆದರೆ ಪತ್ರಿಕೆಯವರು ಮತ್ತು ಇನ್ನೂ ಕೆಲವರು ಹೇಳುವಂತೆ ಹುಚ್ಚು ಬೆಲೆ ಅಲ್ಲ. ಬ್ರೆಜಿಲ್, ವಿಯೆಟ್ನಾಂ ಸೇರಿದಂತೆ ಎಲ್ಲ ಕಡೆ ಕಡಿಮೆ ಬೆಳೆಯಾಗಿರುವುದು ಮತ್ತು ಡಾಲರ್ ಎದುರು ರೂಪಾಯಿ ಬೆಲೆ ಇಳಿದಿರುವುದು ಸೇರಿ ಕಾಫಿಗೆ ಈಗಿನ ಬೆಲೆ ಬಂದಿದೆ
ಕಾಫಿಗೆ ಹುಚ್ಚು ಬೆಲೆ ಬಂದದ್ದು ಒಮ್ಮೆ 1994 ಸಮಯದಲ್ಲಿ. ಆಗ ಕೆಲವರು ಬೆಳೆಗಾರರೂ ತಲೆ ಕೆಟ್ಟವರಂತೆ ಖರ್ಚು ಮಾಡಿ ಮತ್ತೆ ಸೋತಿದ್ದರು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಅಂದಿನ ಪೀಳಿಗೆಯವರು ಹಿಂದೆ ಸರಿದು ಯುವಕರು ಕಾಫಿ ಬೆಳೆಯಲ್ಲಿ...
ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26 ರ ಬಜೆಟ್ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಕಟು ಟೀಕೆ ಮಾಡಿದೆ.
ಉದ್ದೇಶ ಮತ್ತು ಸ್ವರೂಪಗಳ ಪ್ರಸ್ತಾಪ ಇಲ್ಲದೇ ಹೊಸ ಭೂ ಕಂದಾಯ ಕಾಯ್ದೆಯ ಘೋಷಣೆ ಮಾಡಿರುವುದು ,ಕೃಷಿ ಭೂಮಿ ಪಹಣಿಗಳಿಗೆ ಆಧಾರ್ ಜೋಡಿಸಿ ಡಿಜಿಟಲೀಕರಣಗೊಳಿಸುವುದು ಈಗಾಗಲೇ ಕೇಂದ್ರಿಕೃತವಾಗಿ ನಿರ್ವಹಿಸಲ್ಪಡುತ್ತಿರುವ ಇಂತಹ ದಾಖಲಾತಿಗಳು , ಭೂ ಗಳ್ಳತನದಂತಹ ಹೊಸ ಹೊಸ ಸೈಬರ್ ಅಪರಾಧಗಳಿಗೆ...
ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಸುಬೆ ಬೆಳೆಯಲಾಗುತ್ತಿದೆ.
ಜನವರಿಯಿಂದ...
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಫೆಬ್ರವರಿ 27 ರಿಂದ ರಾಷ್ಟ್ರೀಯ ತೋಟಗಾರಿಕಾ ಮೇಳ ನಡೆಯತ್ತಿದೆ. ಇದನ್ನು ನೋಡಲು ದೇಶದ ನಾನಾ ಮೂಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಮಾರ್ಚ್ 1 ರಂದು ಮೇಳದ ಸಮಾರೋಪ ಸಮಾರಂಭ ಇದೆ.
ಈ ಬಾರಿಯ ತೋಟಗಾರಿಕೆ ಮೇಳದಲ್ಲಿ ವಿಶೇಷವಾಗಿ ಸೂತ್ರದ ಗೊಂಬೆಯಾಟ ಪ್ರದರ್ಶನ ನಡೆದಿದೆ. ಅರ್ಕಾ ಕ್ರಾಂತಿ ಎಂಬ ಹೆಸರಿನಲ್ಲಿ ಸೂತ್ರದಗೊಂಬೆಯಾಟದ ಮೂಲಕ ರೈತರಿಗೆ ಆಧುನಿಕ ಕೃಷಿಯ ಬಗ್ಗೆ, ಮತ್ತು IIHR ನ ತಂತ್ರಜ್ಞಾನದ ಬಗ್ಗೆ ತಿಳಿಸುವ ಸಲುವಾಗಿ ಈ ರೀತಿಯ ಪ್ರಯೋಗ ಮಾಡಲಾಗಿದೆ.
ಮುಖ್ಯವಾಗಿ ರೈತರ ಬದುಕು ಮತ್ತು...