ರಾಜ್ಯದಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ

0

ಆಗಸ್ಟ್ 31 (ಅಗ್ರಿಕಲ್ಚರ್ ಇಂಡಿಯಾ)   ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ;  ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಹಾವೇರಿ,ಕಲಬುರ್ಗಿ, ವಿಜಯಪುರ, ಯಾದಗಿರ್ ಯಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ,  ತುಮಕೂರು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗಿನ,ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ್, ಕೊಪ್ಪಲ್ನಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ,ಹಾಸನ, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ , ತುಮಕೂರು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ:  

ಕೇರಳ- ಕರ್ನಾಟಕ ಕರಾವಳಿ, ಲಕ್ಷದ್ವೀಪ ಪ್ರದೇಶ, ಮಾಲ್ಡೀವ್ಸ್ ಪ್ರದೇಶ ಮತ್ತು ಪಕ್ಕದ ಆಗ್ನೇಯ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು  ಸಮುದ್ರ  ಪ್ರವೇಶಿಸದಂತೆ ಸೂಚಿಸಲಾಗಿದೆ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ ಇಲ್ಲ.

02 ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು:  ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಒಮ್ಮೊಮ್ಮೆ  ಭಾರಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

02ನೇ ಸೆಪ್ಟೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಮುಂದಿನ 48 ಘಂಟೆಗಳು:  ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಗುಡುಗು ಮುನ್ಸೂಚನೆ: ಮುಂದಿನ 48 ಘಂಟೆಗಳಲ್ಲಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮಂಗಳವಾರ , 31ನೇ ಆಗಸ್ಟ್  2022 /09 ನೇ ಭಾದ್ರಪದ 1943 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿತ್ತು  ಕರಾವಳಿ ಬಹುತೇಕ ಕಡೆಗಳಲ್ಲಿ  ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.

ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಇತರೆ ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಧರ್ಮಸ್ಥಳ (ದಕ್ಷಿಣ ಕನ್ನಡ) 7.

ಇತರೆ ಮುಖ್ಯ ಮಳೆಯ ಪ್ರಮ(ಸೆಂ.ಮೀನಲ್ಲಿ): ಬಬಲೇಶ್ವರ (ವಿಜಯಪುರ ಜಿಲ್ಲೆ)–6; ಸಕಲೇಶಪುರ, ಕೊಣನೂರು (ಎರಡೂ ಹಾಸನ ಜಿಲ್ಲೆ) ತಲಾ 5; ಉತ್ತರ ಕನ್ನಡ ಜಿಲ್ಲೆ, ಬೆಳ್ತಂಗಡಿ(ದಕ್ಷಿಣ ಕನ್ನಡ ಜಿಲ್ಲೆ), ಬಾಳೆಹೊನ್ನೂರು(ಚಿಕ್ಕಮಗಳೂರು ಜಿಲ್ಲೆ) ತಲಾ 4. ಸೈದಾಪುರ (ಯಾದಗಿರಿ ಜಿಲ್ಲೆ), ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ತಲಾ 3. ಕೆರೂರು (ಬಾಗಲಕೋಟೆ ಜಿಲ್ಲೆ), ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ, ಯಡ್ವಾಡ (ಬೆಳಗಾವಿ ಜಿಲ್ಲೆ), ಭಾಲ್ಕಿ (ಬೀದರ್ ಜಿಲ್ಲೆ), ಬೀಳಗಿ (ಬಾಗಲಕೋಟೆ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ಅರಕಲಗೂಡು (ಹಾಸನ ಜಿಲ್ಲೆ), ಶೃಂಗೇರಿ, ಜಯಪುರ (ಚಿಕ್ಕಮಗಳೂರು ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ) ತಲಾ 2; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ, ಹಳಿಯಾಳ (ಉತ್ತರ ಕನ್ನಡ ಜಿಲ್ಲೆ), ಸಿದ್ದಾಪುರ, ಕುಂದಾಪುರ (ಎರಡೂ ಉಡುಪಿ ಜಿಲ್ಲೆ), ರೋಣ, ನರಗುಂದ, ಶಿರಹಟ್ಟಿ (ಎಲ್ಲಾ ಗದಗ ಜಿಲ್ಲೆ), ನಿಪ್ಪಾಣಿ, ಅಥಣಿ, ಲೋಂಡಾ (ಎಲ್ಲಾ ಬೆಳಗಾವಿ ಜಿಲ್ಲೆ), ಧಾರವಾಡ, ಆಲಮಟ್ಟಿ (ವಿಜಯಪುರ ಜಿಲ್ಲೆ). ಶಹಾಪುರ (ಯಾದಗಿರಿ ಜಿಲ್ಲೆ), ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ), ಆಳಂದ (ಕಲಬುರಗಿ ಜಿಲ್ಲೆ), ಧಾರವಾಡ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ಸೋಮವಾರಪೇಟೆ, ನಾಪೋಕ್ಲು, ಪೊನ್ನಂಪೇಟೆ (ಎಲ್ಲಾ ಕೊಡಗು ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ) ತಲಾ 1.

LEAVE A REPLY

Please enter your comment!
Please enter your name here