ಹವಾಮಾನ ಮುನ್ಸೂಚನೆ: ಕರ್ನಾಟಕದ  ಹಲವೆಡೆ ಭಾರಿ ಮಳೆ ಮುನ್ನೆಚ್ಚರಿಕೆ

0

ಕರ್ನಾಟಕ: ಅಕ್ಟೋಬರ್ 15: ಮುಂದಿನ 24 ಘಂಟೆಗಳಲ್ಲಿ:  ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಹಾಗೂ  ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಎಚ್ಚರಿಕೆ  ಇಲ್ಲ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ: ಇಲ್ಲ.

17 ನೇ ಅಕ್ಟೋಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮತ್ತು ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮತ್ತು ಕರಾವಳಿಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಗುಡುಗು ಮುನ್ಸೂಚನೆ:   ಮುಂದಿನ 48 ಘಂಟೆಗಳು:   ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಬಹಳಷ್ಟು ಸಾಧ್ಯತೆ ಇದೆ.

17 ನೇ ಅಕ್ಟೋಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗಿನಿಂದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಶನಿವಾರ, 15ನೇ ಅಕ್ಟೋಬರ್ 2022 / 23 ನೇ ಆಶ್ವೀಜ 1943  ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು  ದಕ್ಷಿಣ ಒಳನಾಡಿನಲ್ಲಿ ಅತಿ ಚುರುಕಾಗಿತ್ತು; ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಮತ್ತು ಆದಾಗ್ಯೂ ಕರಾವಳಿಯಲ್ಲಿ ದುರ್ಬಲವಾಗಿತ್ತು.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಹಲವು  ಕಡೆಗಳಲ್ಲಿ  ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅತಿ ಭಾರೀ ಮಳೆಯ ಪ್ರಮಾಣ (ಸೆಂ.ಮಿ): ಮಂಡ್ಯ 17, ಮಂಡ್ಯ _ ಕೆವಿಕೆ 15

ಭಾರೀ ಮಳೆಯ ಪ್ರಮಾಣ (ಸೆಂ.ಮಿ): ಟಿ ನರಸೀಪುರ (ಮೈಸೂರು ಜಿಲ್ಲೆ), ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ) ತಲಾ 9; ಮಂಠಾಳ (ಬೀದರ್ ಜಿಲ್ಲೆ), ಯಡ್ರಾಮಿ (ಕಲಬುರ್ಗಿ ಜಿಲ್ಲೆ), ಕನಕಪುರ (ರಾಮನಗರ ಜಿಲ್ಲೆ), ಮಾಲೂರು (ಕೋಲಾರ ಜಿಲ್ಲೆ) ತಲಾ 8; ಪಾಂಡವಪುರ (ಮಂಡ್ಯ ಜಿಲ್ಲೆ), ಹಗರಿಬೊಮ್ಮನಹಳ್ಳಿ (ಬಳ್ಳಾರಿ ಜಿಲ್ಲೆ) ತಲಾ 7.

ಇತರೆ ಪ್ರಮುಖ ಮಳೆ ಪ್ರಮಾಣ (ಸೆಂ.ಮಿ): ಸೆಡಬಾಳ (ಬೆಳಗಾವಿ ಜಿಲ್ಲೆ), ರಬಕವಿ (ಬಾಗಲಕೋಟೆ ಜಿಲ್ಲೆ), ರಾಮನಗರ, ಜ್ಞಾನಭಾರತಿ ಬಿಯು ಕ್ಯಾಂಪಸ್, ಜಿಕೆವಿಕೆ (ಎರಡೂ ಬೆಂಗಳೂರು ನಗರ ಜಿಲ್ಲೆ) ತಲಾ 6; ಸವಣೂರು (ಹಾವೇರಿ ಜಿಲ್ಲೆ), ಬೆಂಗಳೂರು ನಗರ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಉತ್ತರಹಳ್ಳಿ, ಎಂಪ್ರಿ (ಎಲ್ಲಾ ಬೆಂಗಳೂರು ನಗರ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ), ಮುಳಬಾಗಲು (ಕೋಲಾರ ಜಿಲ್ಲೆ) ಮೈಸೂರು ತಲಾ 5; ಚನ್ನಪಟ್ಟಣ (ರಾಮನಗರ ಜಿಲ್ಲೆ), ಎಲೆಕ್ಟ್ರಾನಿಕ್ ಸಿಟಿ ARG (ಬೆಂಗಳೂರು ನಗರ ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಚಾಮರಾಜನಗರ ತಲಾ 4; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಚಿತ್ತಾಪುರ (ಕಲಬುರ್ಗಿ ಜಿಲ್ಲೆ), ನಿಪ್ಪಾಣಿ (ಬೆಳಗಾವಿ ಜಿಲ್ಲೆ), ಬೆಂಗಳೂರು HAL ವಿಮಾನ ನಿಲ್ದಾಣ, ನಂಜನಗೂಡು, ಕೆ ಆರ್ ನಗರ, ಭೇರ್ಯ (ಎಲ್ಲಾ ಮೈಸೂರು ಜಿಲ್ಲೆ) , ಮಳವಳ್ಳಿ (ಮಂಡ್ಯ ಜಿಲ್ಲೆ) , ಜಯಪುರ (ಚಿಕ್ಕಮಗಳೂರು  ಜಿಲ್ಲೆ), ಬಂಡೀಪುರ, ಹರದನಹಳ್ಳಿ (ಚಾಮರಾಜನಗರ ಜಿಲ್ಲೆ) ತಲಾ 3; ಮಂಚಿಕೆರೆ (ಉತ್ತರ ಕನ್ನಡ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ, ರಾಯಬಾಗ ಸಂಕೇಶ್ವರ, ಸದಲಗಾ, ಗೋಕಾಕ (ಎಲ್ಲವೂ ಬೆಳಗಾವಿ ಜಿಲ್ಲೆ), ಹುಮ್ನಾಬಾದ್, ಭಾಲ್ಕಿ (ಎರಡೂ ಬೀದರ್ ಜಿಲ್ಲೆ), ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ), ಕಲಬುರ್ಗಿ, ಸೇಡಂ (ಕಲಬುರಗಿ ಜಿಲ್ಲೆ), ಅಣ್ಣಿಗೆರೆ (ಧಾರವಾಡ ಜಿಲ್ಲೆ), ಎಚ್ ಡಿ ಕೋಟೆ (ಮೈಸೂರು ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ಮಿಡಿಗೇಶಿ (ತುಮಕೂರು ಜಿಲ್ಲೆ), ರಾಯಲ್ಪಾಡು (ಕೋಲಾರ ಜಿಲ್ಲೆ), ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ), ದಾವಣಗೆರೆ, ಹರಪನಹಳ್ಳಿ (ದಾವಣಗೆರೆ ಜಿಲ್ಲೆ) ತಲಾ 2; ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ), ಬೀದರ್, ನಿಟ್ಟೂರು, ಮನ್ನಳ್ಳಿ, ಹಲಬರ್ಗಾ, ಹಳ್ಳಿಖೇಡ್, ಔರಾದ್ (ಎಲ್ಲವೂ ಬೀದರ್ ಜಿಲ್ಲೆ), ಧಾರವಾಡ, ಹಾವೇರಿ, ಯೆದವಾಡ (ಬೆಳಗಾವಿ ಜಿಲ್ಲೆ), ಮಧುಗಿರಿ (ತುಮಕೂರು ಜಿಲ್ಲೆ ), ಚಿತ್ರದುರ್ಗ,  ಪರಶುರಾಂಪುರ, ಭರಮಸಾಗರ, ಹಿರಿಯೂರು (ಎಲ್ಲಾ ಚಿತ್ರದುರ್ಗ ಜಿಲ್ಲೆ), ಕೊಟ್ಟೂರು (ಬಳ್ಳಾರಿ ಜಿಲ್ಲೆ), ಕಳಸ, ಯಗಟಿ (ಎರಡೂ ಚಿಕ್ಕಮಗಳೂರು ಜಿಲ್ಲೆ), ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ) , ಐಟಿಸಿ ಜಾಲ (ಬೆಂಗಳೂರು ನಗರ  ಜಿಲ್ಲೆ) ತಲಾ 1 .

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 32.8  ಡಿ.ಸೆ. ಶಿರಾಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 19.0 ಡಿ.ಸೆ. ಮೈಸೂರಿನಲ್ಲಿ ದಾಖಲಾಗಿದೆ.

LEAVE A REPLY

Please enter your comment!
Please enter your name here