“ಸಣ್ಣ ಪ್ರೀಮಿಯಂ, ದೊಡ್ಡ ಸುರಕ್ಷೆ” ಎಂಬ ಧ್ಯೇಯವಾಕ್ಯದೊಂದಿಗೆ ಮಂಡ್ಯ ಜಿಲ್ಲೆಯ ರೈತ ಬಾಂಧವರಿಗಾಗಿ 2026ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ಮಂಜೂರಾತಿ ನೀಡಿದೆ. ಪ್ರಾಕೃತಿಕ ವಿಕೋಪಗಳು, ಕೀಟಬಾಧೆ ಹಾಗೂ ರೋಗಗಳಿಂದ ಬೆಳೆ ಹಾನಿಯಾದಲ್ಲಿ ರೈತರನ್ನು ಆರ್ಥಿಕ ಸಂಕಷ್ಟದಿಂದ ರಕ್ಷಿಸಲು ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ.
ಮಂಡ್ಯ ಜಿಲ್ಲೆಯ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ನಿಗದಿಪಡಿಸಿರುವ ಬೆಳೆಗಳು, ವಿಮಾ ಮೊತ್ತ, ರೈತರು ಪಾವತಿಸಬೇಕಾದ ಕಂತು ಮತ್ತು ಕೊನೆಯ ದಿನಾಂಕಗಳ ಸಂಪೂರ್ಣ ಮಾಹಿತಿ

ಅಗತ್ಯ ದಾಖಲೆಗಳು: ರೈತರು ಅರ್ಜಿ ಫಾರಂ ಜೊತೆಗೆ ಪಹಣಿ (RTC), ಬ್ಯಾಂಕ್ ಪಾಸ್ ಬುಕ್ ಹಾಗೂ ಆಧಾರ್ ಸಂಖ್ಯೆಯ ವಿವರಗಳನ್ನು ಸಲ್ಲಿಸಬೇಕು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರವನ್ನು ಪಡೆಯಲು ನಿಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ.ಸಾಲ ಪಡೆದಿರುವ ರೈತರು ಕೂಡ ವಿಮೆ ಮಾಡಿಸಿಕೊಳ್ಳಲು ನಾಗರಿಕ ಸೇವಾ ಕೇಂದ್ರ (CSC Center), ಬ್ಯಾಂಕ್ ಶಾಖೆ, ಗ್ರಾಮ್ ಒನ್ ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು ಸಂಪರ್ಕಿಸಬಹುದು.
ನೋಂದಣಿ ಎಲ್ಲಿ ಮಾಡಿಸಬೇಕು?
ರೈತರು ತಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರಗಳು (CSC), ಗ್ರಾಮ್ ಒನ್ ಕೇಂದ್ರಗಳು, ರಾಷ್ಟ್ರೀಕೃತ ಅಥವಾ ವಾಣಿಜ್ಯ ಬ್ಯಾಂಕುಗಳ ಶಾಖೆಗಳಿಗೆ ಭೇಟಿ ನೀಡಿ ನಿಗದಿತ ದಿನಾಂಕದ ಒಳಗೆ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಳ್ಳಬಹುದು.ಮಂಡ್ಯ ಜಿಲ್ಲೆಗೆ ಆಯ್ಕೆಯಾಗಿರುವ ವಿಮಾ ಸಂಸ್ಥೆ: “ಇಫ್ಕೋ ಟೋಕಿಯೋ ಜನರಲ್ ಇನ್ಶೂರೆನ್ಸ್ ಕಂಪನಿ”
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಟೋಲ್ ಫ್ರೀ ನಂಬರ್: 1800 103 5499
ಜಿಲ್ಲಾ ವಿಮಾ ಸಂಸ್ಥೆಯ ಪ್ರತಿನಿಧಿ: 9164318796
ಕೊನೆಯ ದಿನಾಂಕದವರೆಗೂ ಕಾಯದೆ, ತಕ್ಷಣವೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಬ್ಯಾಂಕ್ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಮುಂಗಾರು ಬೆಳೆಗಳಿಗೆ ವಿಮಾ ಸುರಕ್ಷತೆ ಪಡೆದುಕೊಳ್ಳಿ. ಈ ಲೇಖನವನ್ನು ನಿಮ್ಮ ಪರಿಚಿತ ರೈತ ಗ್ರೂಪ್ಗಳಿಗೆ ಮತ್ತು ಮಿತ್ರರಿಗೆ ಶೇರ್ ಮಾಡಿ ನೆರವಾಗಿ.

































