ರಾಜ್ಯದ ಬಹುತೇಕ ಕಡೆ ಮಳೆ ಸಾಧ್ಯತೆ

0

ಶನಿವಾರ / 08 ನೇ ಜುಲೈ 2023 / 17 ನೇ ಆಷಾಢ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಅತಿ ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕೊಲ್ಲೂರು (ಉಡುಪಿ ಜಿಲ್ಲೆ) 15; ಕುಮಟಾ (ಉತ್ತರ ಕನ್ನಡ ಜಿಲ್ಲೆ) 13; ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ) 12.

ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 11; ಹೊನ್ನಾವರ, ಶಿರಾಲಿ , ಗೋಕರ್ಣ, ಮಂಕಿ (ಎಲ್ಲಾ ಉತ್ತರ ಕನ್ನಡ ಜಿಲ್ಲೆ) ತಲಾ 9; ಬೆಳ್ತಂಗಡಿ, ಸುಬ್ರಹ್ಮಣ್ಯ (ಎರಡೂ ದಕ್ಷಿಣ ಕನ್ನಡ ಜಿಲ್ಲೆ) ತಲಾ 8; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಅಂಕೋಲಾ (ಉತ್ತರ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) ತಲಾ 7.

ಇತರ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ಮೂಲ್ಕಿ, ಪುತ್ತೂರು ಎಚ್‌ಎಂಎಸ್, ಧರ್ಮಸ್ಥಳ, ಸುಳ್ಯ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಕದ್ರಾ (ಉತ್ತರ ಕನ್ನಡ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ಲಿಂಗನಮಕ್ಕಿ ಎಚ್‌ಎಂಎಸ್ (ಶಿವಮೊಗ್ಗ ಜಿಲ್ಲೆ) ತಲಾ 6; ಲೋಂಡಾ (ಬೆಳಗಾವಿ ಜಿಲ್ಲೆ ; ಮಂಚಿಕೆರೆ (ಉತ್ತರ ಕನ್ನಡ ಜಿಲ್ಲೆ.), ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಸಿದ್ದಾಪುರ, ಕಾರ್ಕಳ (ಎರಡೂ ಉಡುಪಿ ಜಿಲ್ಲೆ), ಕಿರವತ್ತಿ (ಉತ್ತರ ಕನ್ನಡ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ) ತಲಾ 5; ಕೋಟ (ಉಡುಪಿ ಜಿಲ್ಲೆ), ಜೋಯಿಡಾ (ಉತ್ತರ ಕನ್ನಡ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ), ನಾಪೋಕ್ಲು, ಪೊನ್ನಂಪೇಟೆ ಪಿಡಬ್ಲ್ಯೂಡಿ (ಎರಡೂ ಕೊಡಗು ಜಿಲ್ಲೆ) ತಲಾ 4; ಹಳಿಯಾಳ, ಯಲ್ಲಾಪುರ, ಬನವಾಸಿ, ಕಾರವಾರ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಮಾಣಿ (ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ) ತಲಾ 3; ಬೆಳಗಾವಿ ನಗರ, ಕೊಪ್ಪ, ಜಯಪುರ, ಶೃಂಗೇರಿ ಎಚ್‌ಎಂಎಸ್, ಬಾಳೆಹೊನ್ನೂರು, ಎನ್‌ಆರ್ ಪುರ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ), ಸೋಮವಾರಪೇಟೆ, ಹಾರಂಗಿ (ಕೊಡಗು ಜಿಲ್ಲೆ), ತ್ಯಾಗರ್ತಿ, ಆನವಟ್ಟಿ ( ಎರಡೂ ಶಿವಮೊಗ್ಗ ಜಿಲ್ಲೆ) , ಶಿವಮೊಗ್ಗ ಹಾಸನ ತಲಾ 2; ನಿಪ್ಪಾಣಿ, ಕಣಬರ್ಗಿ ಆವ್ಸ್, ಸಂಕೇಶ್ವರ (ಎಲ್ಲಾ ಬೆಳಗಾವಿ ಜಿಲ್ಲೆ) ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ಅಣ್ಣಿಗೆರೆ ಅರ್ಸ್, ಹುಬ್ಬಳ್ಳಿ (ಎರಡೂ ಧಾರವಾಡ ಜಿಲ್ಲೆ), ನಲ್ವತವಾಡ (ವಿಜಯಪುರ ಜಿಲ್ಲೆ), ಲಿಂಗಸೂಗೂರು (ರಾಯಚೂರು ಜಿಲ್ಲೆ), ಗುತ್ತಲ್ (ಹಾವೇರಿ ಜಿಲ್ಲೆ) , ರೋನ್ (ಗದಗ ಜಿಲ್ಲೆ) , ಹೊಸಕೋಟೆ(ಬೆಂಗಳೂರು ಗ್ರಾಮಾಂತರ ಜಿಲ್ಲೆ), ಹರಪನಹಳ್ಳಿ (ವಿಜಯನಗರ ಜಿಲ್ಲೆ), ), ಬೇಲೂರು (ಹಾಸನ ಜಿಲ್ಲೆ ), ಬಂಡೀಪುರ (ಚಾಮರಾಜನಗರ ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ), ಚಿಂತಾಮಣಿ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 1

10 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಇಲ್ಲ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಗಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

10 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here