ಹವಾಮಾನ ವರದಿ: ಭಾರೀ ಮ:ಳೆ ಮುನ್ನೆಚ್ಚರಿಕೆ, ಯೆಲ್ಲೋ ಅಲರ್ಟ್

0

ಬೆಂಗಳೂರು: ಅಕ್ಟೋಬರ್ 20:  ನೈಋತ್ಯ ಮಾನ್ಸೂನ್ ಕರ್ನಾಟಕದ ಒಳಭಾಗದಲ್ಲಿ ಸಕ್ರಿಯವಾಗಿದೆ ಮತ್ತು ಕರಾವಳಿ ಕರ್ನಾಟಕದ ಮೇಲೆ ಸಾಮಾನ್ಯವಾಗಿದೆ.

ಮುಂದಿನ 24 ಗಂಟೆಗಳ ಮುನ್ಸೂಚನೆ: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ   ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

ಭಾರೀ ಮಳೆಯ ಎಚ್ಚರಿಕೆ:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಪ್ರತ್ಯೇಕ ಸ್ಥಳಗಳಲ್ಲಿ, ರಾಮನಗರ ಮತ್ತು ಶಿವಮೊಗ್ಗ,   ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಭಾಗಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಉಂಟಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here